ರಾಜ್ಯ ಸಮನ್ವಯ ಸಮಿತಿ
ಕೃಷಿ ಶಿಕ್ಷಣ, ಸಂಶೋಧನೆ ಮತ್ತು ವಿಸ್ತರಣೆಗಾಗಿ ರಾಜ್ಯ ಸಮನ್ವಯ ಸಮಿತಿ
- ರಾಜ್ಯದ ಎಲ್ಲಾ ಕೃಷಿ ವಿಶ್ವವಿದ್ಯಾಲಯಗಳ ಚಟುವಟಿಕೆಗಳಲ್ಲಿ, ವಿಶೇಷವಾಗಿ ಬೋಧನೆ, ಸಂಶೋಧನೆ, ವಿಸ್ತರಣಾ ಶಿಕ್ಷಣ ಮತ್ತು ಇತರ ಸಾಮಾನ್ಯ ಆಸಕ್ತಿ ವಿಷಯಗಳಿಗೆ ಸಂಬಂಧಿಸಿದಂತೆ ಪರಿಣಾಮಕಾರಿ ಸಮನ್ವಯದ ಉದ್ದೇಶಕ್ಕಾಗಿ ಕೃಷಿ ಶಿಕ್ಷಣ, ಸಂಶೋಧನೆ ಮತ್ತು ವಿಸ್ತರಣೆಗಾಗಿ ಕರ್ನಾಟಕ ರಾಜ್ಯ ಸಮನ್ವಯ ಸಮಿತಿ ಇರುತ್ತದೆ.
- ರಾಜ್ಯ ಸಮನ್ವಯ ಸಮಿತಿಯು ಈ ಕೆಳಗಿನ ಸದಸ್ಯರನ್ನು ಒಳಗೊಂಡಿರುತ್ತದೆ:
ಕರ್ನಾಟಕ ಸರ್ಕಾರದ ಕೃಷಿ ಉಸ್ತುವಾರಿ ಸಚಿವರು ಅಧ್ಯಕ್ಷರಾಗಿರುತ್ತಾರೆ
ರಾಜ್ಯದ ಎಲ್ಲಾ ಕೃಷಿ ವಿಶ್ವವಿದ್ಯಾಲಯಗಳ ಕುಲಪತಿಗಳು
ಎಲ್ಲಾ ಕೃಷಿ ವಿಶ್ವವಿದ್ಯಾಲಯಗಳ ಶಿಕ್ಷಣ, ಸಂಶೋಧನೆ ಮತ್ತು ವಿಸ್ತರಣೆಯ ನಿರ್ದೇಶಕರು
ರಾಜ್ಯದ ಎಲ್ಲಾ ಕೃಷಿ ವಿಶ್ವವಿದ್ಯಾಲಯಗಳ ಕುಲಸಚಿವರು.
ಸರ್ಕಾರದ ಕೃಷಿ ಇಲಾಖೆಯ ಕಾರ್ಯದರ್ಶಿಯು ಸಮಿತಿಯ ಸದಸ್ಯ ಕಾರ್ಯದರ್ಶಿಯಾಗಿರುತ್ತಾರೆ. - ಸಮನ್ವಯ ಸಮಿತಿಯ ಕಾರ್ಯಗಳು ಈ ಕೆಳಗಿನ ಕಾರ್ಯಗಳನ್ನು ನಿರ್ವಹಿಸುತ್ತವೆ:
ರಾಜ್ಯದಲ್ಲಿನ ಕೃಷಿ ವಿಶ್ವವಿದ್ಯಾಲಯಗಳ ಸ್ವಾಯತ್ತತೆಯನ್ನು ಖಾತ್ರಿಪಡಿಸುವುದು
ಶೈಕ್ಷಣಿಕ ಕಾರ್ಯಕ್ರಮಗಳು ಮತ್ತು ನಿಯಮಗಳ ಸಾಮರಸ್ಯ ಏರ್ಪಡಿಸುವುದು
ರಾಜ್ಯದ ವಿವಿಧ ಕೃಷಿ ವಿಶ್ವವಿದ್ಯಾನಿಲಯಗಳ ನಡುವೆ ಶಿಕ್ಷಣ, ಸಂಶೋಧನೆ ಮತ್ತು ವಿಸ್ತರಣೆಯಲ್ಲಿ ಸಹಕಾರ ಕ್ಷೇತ್ರಗಳನ್ನು ಗುರುತಿಸುವ ಮೂಲಕ ಗೌರವ ಮತ್ತು
ಕೂಡುಬಲವರ್ಧನೆಯನ್ನು ಖಚಿತಪಡಿಸಿಕೊಳ್ಳುವುದು.
ಕೃಷಿ ಬೆಳವಣಿಗೆಯನ್ನು ವೇಗಗೊಳಿಸಲು ರಾಜ್ಯದ ಕೃಷಿ ವಿಶ್ವವಿದ್ಯಾಲಯಗಳು ಮತ್ತು ಅಭಿವೃದ್ಧಿ ಇಲಾಖೆಗಳ ಜಂಟಿ ಪ್ರಯತ್ನಗಳಿಗಾಗಿ ಹೊಸ ಉಪಕ್ರಮಗಳು ಮತ್ತು ಕ್ರಿಯಾ ಯೋಜನೆಗಳನ್ನು ಸೂಚಿಸುವುದು
ಅಂತರ-ವಿಶ್ವವಿದ್ಯಾಲಯಗಳು ಮತ್ತು ವಿಶ್ವವಿದ್ಯಾನಿಲಯ – ರಾಜ್ಯ ಸಮಸ್ಯೆಗಳ ಪರಿಹಾರ
ಸಮಿತಿಯು ವರ್ಷದಲ್ಲಿ ಕನಿಷ್ಠ ಎರಡು ಬಾರಿ ಸಭೆ ಸೇರುವುದು